1 ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು. 2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು. 3 ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.
8 ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,
11 “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು. 12 ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
13 “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ. 14 ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’ ”
<- ಜೆಕರ್ಯನು 6ಜೆಕರ್ಯನು 8 ->