1 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು. 2 ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.
3 ಯೆಹೋವ ದೇವರು ಇದನ್ನು ಕುರಿತು ಮನಮರುಗಿ,
4 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು. 5 ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.
6 ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ,
7 ಆತನು ನನಗೆ ಹೀಗೆ ತೋರಿಸಿದನು. ಯೆಹೋವ ದೇವರು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದರು. ಆತನ ಕೈಯಲ್ಲಿ ನೂಲುಗುಂಡು ಇತ್ತು. 8 ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು.
10 ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. 11 ಆಮೋಸನು ಹೇಳಿದ್ದೇನೆಂದರೆ:
12 ಅನಂತರ ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ: “ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿ ದುಡಿದು ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. 13 ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ. ಏಕೆಂದರೆ ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ, ರಾಜ್ಯದ ಆಲಯವಾಗಿಯೂ ಇದೆ,” ಎಂದನು.
14 ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು. 15 ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.” 16 ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು:
17 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: