3 ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ, ಹೇಫೆರನ ಮಗನೂ ಆದ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಆದರೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಪುತ್ರಿಯರು ಇದ್ದರು. 4 ಇವರು ಯಾಜಕನಾದ ಎಲಿಯಾಜರನ ಬಳಿಗೂ ನೂನನ ಮಗ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆ, “ನಮ್ಮ ಸಹೋದರರಲ್ಲಿ ನಮಗೂ ಸೊತ್ತನ್ನು ಕೊಡುವಂತೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರು,” ಎಂದರು. ಆದ್ದರಿಂದ ಅವರ ತಂದೆಗಳ ಸಹೋದರರ ಜೊತೆಗೆ ಅವರಿಗೂ ಯೆಹೋವ ದೇವರ ವಾಕ್ಯದ ಪ್ರಕಾರ ಸೊತ್ತನ್ನು ಕೊಟ್ಟನು. 5 ಯೊರ್ದನ್ ನದಿ ಆಚೆಯಲ್ಲಿರುವ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳ ಜೊತೆಗೆ ಮನಸ್ಸೆಗೆ ಬಿದ್ದ ಚೀಟಿನಲ್ಲಿ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು. 6 ಏಕೆಂದರೆ ಮನಸ್ಸೆಯ ಪುತ್ರಿಯರು ಸಹ ಅವನ ಪುತ್ರರಲ್ಲಿ ಸೊತ್ತನ್ನು ಹೊಂದಿದ್ದರು. ಆದರೆ ಉಳಿದ ಮನಸ್ಸೆಯ ಪುತ್ರರಿಗೆ ಗಿಲ್ಯಾದ್ ನಾಡು ದೊರೆಯಿತು.
12 ಆದರೆ ಮನಸ್ಸೆಯ ಸಂತತಿಯರಿಗೆ ಆ ಪಟ್ಟಣಗಳ ನಿವಾಸಿಗಳಾದ ಕಾನಾನ್ಯರನ್ನು ಹೊರಡಿಸುವುದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ನಿರ್ಧರಿಸಿದ್ದರು. 13 ಆದರೆ ಇಸ್ರಾಯೇಲರು ಬಲಗೊಂಡಾಗ, ಕಾನಾನ್ಯರನ್ನು ಹೊರಡಿಸದೆ ಅವರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡರು.
14 ಯೋಸೇಫನ ಸಂತತಿಯರು ಯೆಹೋಶುವನಿಗೆ, “ಯೆಹೋವ ದೇವರು ನಮ್ಮನ್ನು ಈವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ, ನಾವು ಮಹಾ ಜನಾಂಗವಾಗಿದ್ದೇವೆ. ಹೀಗಿರುವಾಗ ನೀವು ನಮಗೆ ಸೊತ್ತಾಗಿ ಒಂದೇ ಒಂದು ಭಾಗವನ್ನು ಮಾತ್ರ ಪಾಲನ್ನಾಗಿ ಕೊಟ್ಟಿದ್ದು ಏಕೆ?” ಎಂದು ಕೇಳಿದರು.
15 ಅದಕ್ಕೆ ಯೆಹೋಶುವನು ಉತ್ತರವಾಗಿ ಅವರಿಗೆ, “ನೀವು ಹೆಚ್ಚು ಜನರಾಗಿದ್ದರೆ ಮತ್ತು ನಿಮಗೆ ಎಫ್ರಾಯೀಮ್ ಪರ್ವತವು ಸಾಲದಿದ್ದರೆ, ನೀವು ಪೆರಿಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡನ್ನು ಕಡಿದು ನಿಮಗೆ ಸ್ಥಳಮಾಡಿಕೊಳ್ಳಿರಿ,” ಎಂದನು.
16 ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು.
17 ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯೀಮನಿಗೂ ಮನಸ್ಸೆಗೂ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವುದು. 18 ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು.
<- ಯೆಹೋಶುವ 16ಯೆಹೋಶುವ 18 ->